ಮೈಸೂರಿನ ಜಂಬೂ ಸವಾರಿಗೆ ಸಿಎಂ ಚಾಲನೆ; ನಾಡ ಅಧಿದೇವತೆ ಹೊತ್ತು ಹೆಜ್ಜೆ ಹಾಕಿದ ಅಭಿಮನ್ಯು!

Share to all

ಸಾಂಸ್ಕೃತಿಕ ನಗರಿಯಲ್ಲಿ ಮೇಳೈಸಿದ ಜಂಬೂ ಸವಾರಿ. ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ಗಾಂಭೀರ್ಯದಿಂದ ಕ್ಯಾಪ್ಟನ್ ಅಭಿಮನ್ಯು ಸಾಗಿದ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ.

ರಾಜವಂಶಸ್ಥ & ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಥ್​ ನೀಡಿದ್ದಾರೆ. ಅಧಿದೇವತೆ ಚಾಮುಂಡಿಯನ್ನ ಅಭಿಮನ್ಯು ಹೊತ್ತಿದ್ದಾನೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ 31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ, ಆಚಾರ-ವಿಚಾರ, ಭೌಗೋಳಿಕ ಹಿನ್ನೆಲೆ ಹಾಗೂ ಇಲಾಖಾವಾರು, ನಿಗಮ ಮಂಡಳಿ , ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ 51 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಗಿದೆ.


Share to all

You May Also Like

More From Author