ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಬೇಲ್ ಕನಸು ನುಚ್ಚು ನೂರು – ಜೈಲೇ ಗತಿ

Share to all

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಕೇಸ್​ನಲ್ಲಿ ಎ2 ಆರೋಪಿ ಆಗಿರುವ ದಾಸ ಬೇಲ್​ ಪಡೆದು ಹೊರಬರುವ ದಿನಕ್ಕಾಗಿ ಕಾಯ್ತಿದ್ರು. ಆದ್ರೆ ಮತ್ತೆ ದರ್ಶನ್​ಗೆ ಜೈಲೇ ಗತಿ ಆಗಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ ಜಾಮೀನು ಕೊಡಲು ನಿರಾಕರಿಸಿದೆ. ಇದರಿಂದ ದರ್ಶನ್ ಜೈಲಿನಲ್ಲೇ ಮುಂದುವರಿಯುವುದು ಅನಿವಾರ್ಯ ಆಗಿದೆ. ಅವರು ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆದರೆ ಪ್ರಕರಣದ A13 ಆರೋಪಿ ದೀಪಕ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅವರು ಜೂನ್ 11ರಂದು ಅರೆಸ್ಟ್ ಆದರು. ಆ ಬಳಿಕ ಅವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು. ಆದರೆ, ಅಲ್ಲಿ ಅವರು ಐಷಾರಾಮಿ ವ್ಯವಸ್ಥೆ ಪಡೆದ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಈಗ ಈ ತೀರ್ಪಿನಿಂದ ಅವರು ಬಳ್ಳಾರಿ ಜೈಲಲ್ಲೇ ಇರಬೇಕಾಗಿದೆ.

 

 


Share to all

You May Also Like

More From Author