ಬೆಳಗಾವಿ:- ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಸರ್ಕಾರಿ ನೌಕರ ನೇಣಿಗೆ ಶರಣಾದ ಘಟನೆ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದೆ. ರುದ್ರಣ್ಣ ಯಡವಣ್ಣ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಾವಿಗೀಡಾಗ ರುದ್ರಣ್ಣ ಯಡವಣ್ಣನವರು ತಹಶೀಲ್ದಾರ್ ಬಸವರಾಜ ನಾಗರಾಳ ಕಚೇರಿಯಲ್ಲಿ SDA ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ನೇರವಾಗಿ ಬರೆಯುವ ಮೂಲಕ ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ.
ರುದ್ರಣ್ಣ ಸಾವಿಗೂ ಮುನ್ನ ವಾಟ್ಸ್ಆ್ಯಪ್ನಲ್ಲಿ ಸಚಿವೆಯೊಬ್ಬರ ಪಿಎ ಮತ್ತು ತಹಶೀಲ್ದಾರ್ ಹೆಸರು ಉಲ್ಲೇಖಿಸಿದ್ದಾರೆ. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ ನಾಗರಾಳ ಮತ್ತು ಸಚಿವೆಯೊಬ್ಬರ ಪಿಎ ಸೋಮು ಕಾರಣ ಅಂತಾ ಬರೆದು ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ.ಇನ್ನು ನೌಕರ ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ. ಘಟನಾ ಸ್ಥಳಕ್ಕೆ ತಹಶಿಲ್ದಾರ್, ಖಡೇಬಜಾರ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.