ಮೈಸೂರು: ಬಿಜೆಪಿ, ಜೆಡಿಎಸ್ನವರು ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್ನಲ್ಲಿ ಉತ್ತರ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರೊಬ್ಬರಿ ಎರಡು ಗಂಟೆಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,
ಲೋಕಾಯುಕ್ತ ಸ್ವತಂತ್ರವಾಗಿ ತನಿಖೆ ಮಾಡುತ್ತಿರುವ ಸಂಸ್ಥೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗೆ ಉತ್ತರಿಸಿದ್ದೇನೆ. ಎಲ್ಲವೂ ಕೂಡ ಕಾನೂನು ಪ್ರಕಾರವೇ ನಡೆದಿದೆ. ಬಿಜೆಪಿ, ಜೆಡಿಎಸ್ನವರು ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್ನಲ್ಲಿ ಉತ್ತರ ನೀಡುತ್ತೇನೆ ಎಂದು ಹೇಳಿದರು.
ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ. ಇನ್ನು, ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಬಿಜೆಪಿಯವರು ಆಗ್ರಹಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಯಾವುದಾದರೂ ಕೇಸ್ ಸಿಬಿಐಗೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.