ಆ ಪಾಪ ನಿನ್ನ ಗ್ಯಾರಂಟಿ ಸುಮ್ನೆ ಬಿಡಲ್ಲ ಎಂದು ಹೇಳುವ ಮೂಲಕ ಗೋಲ್ಡ್ ಸುರೇಶ್ಗೆ ಅನುಷಾ ಶಾಪ ಹಾಕಿದ್ದಾರೆ.ನಿನ್ನೆ ಬಿಗ್ಬಾಸ್ ಕೊಟ್ಟ ನಿಲ್ಲೆ ನಿಲ್ಲೆ ಕಾವೇರಿ ಟಾಸ್ಕ್ನಲ್ಲಿ ಸ್ಪರ್ಧಿಗಳ ಮಧ್ಯೆ ಗಲಾಟೆ ನಡೆದಿದೆ. ಆಗ ಗೋಲ್ಡ್ ಸುರೇಶ್ ತಮ್ಮ ಡ್ರಮ್ ಬಳಿ ಬಂದ ಸ್ಪರ್ಧಿಗಳಿಗೆ ಗುದ್ದಿ ತಳ್ಳಿದ್ದಾರೆ. ಅದೇ ಜಾಗದಲ್ಲಿದ್ದ ಅನುಷಾ ಅವರಿಗೆ ಪೆಟ್ಟಾಗಿದೆ. ಆಗ ಕೋಪಗೊಂಡ ಅನುಷಾ, ಒಂದು ಕಾಮನ್ಸೆನ್ಸ್ ಇಲ್ಲೂ ಹೇಗೆ ವರ್ತನೆ ಮಾಡಬೇಕು ಅಂತ, ಹೀಗೆಂನಾ ನಿಮ್ಮ ಮನೆಯಲ್ಲಿ ಬೇಳ್ಸಿದ್ದು ಅಂತ ಹೇಳಿದ್ದಾರೆ. ಇದಾದ ಬಳಿಕ ಕೈಯಲ್ಲಿ ಎಳೆಯೋದಕ್ಕೆ ಬಂದರೆ ಕಾಲಲ್ಲಿ ಒದೆಯುತ್ತಾರೆ. ನನ್ನನ್ನೂ ಅವರ ಅಪ್ಪ ಸಾಕ್ತಾನಾ ಅಂತ ಕೂಗಾಡಿದ್ದಾರೆ. ಮತ್ತೆ ಇದೇ ವಿಚಾರಕ್ಕೆ ಟಾಸ್ಕ್ ಮುಗಿದ ಬಳಿಕ ಗಲಾಟೆಯಾಗಿದೆ.
ಇನ್ನೂ, ಬಿಗ್ಬಾಸ್ ಮನೆಯ ಎಲ್ಲ ಸ್ಪರ್ಧಿಗಳಿಗೆ ದೊಡ್ಡ ಅವಕಾಶವೊಂದನ್ನು ಕೊಟ್ಟಿದ್ದಾರೆ. ಹೀಗಾಗಿ ನಾಲ್ಕು ತಂಡವನ್ನು ರಚಿಸಿದ ಬಿಗ್ಬಾಸ್ ಈ ಟಾಸ್ಕ್ಗಳನ್ನು ನೋಡಿದ್ದಾರೆ. ಟಾಸ್ಕ್ ಗೆದ್ದ ತಂಡಕ್ಕೆ ಬಿಗ್ಬಾಸ್ ಮನೆಯಲ್ಲಿರೋ ಅಧಿಕಾರವನ್ನು ಏಕಾಕಾಲದಲ್ಲಿ ಪಡೆಯಲು, ಅನುಭವಿಸಲು ಹಾಗೂ ಈ ಮನೆಯ ಮೇಲಿನ ಅಧಿಕಾರವನ್ನು ಸಾಧಿಸಲು ಒಂದೇ ವಾರದಲ್ಲಿ ಅನುಭವಿಸಬಹುದಾಗಿದೆ.