ಹುಬ್ಬಳ್ಳಿ ಖಾಸಗಿ ಹೊಟೆನಲ್ಲಿ ಕಾಂಗ್ರೆಸ್ ಮೀಟಿಂಗ್..ಸುರ್ಜೆವಾಲಾ, ಡಿಕೆಶಿ ನೇತೃತ್ವದಲ್ಲಿ ಸಭೆ….
ಹುಬ್ಬಳ್ಳಿ: ಜೈ ಬಾಪು, ಜೈಭೀಮ, ಜೈ ಸಂವಿಧಾನ ಸಮಾವೇಶದ ಹಿನ್ನೆಲೆಯಲ್ಲಿ,
ಹುಬ್ಬಳ್ಳಿಯ ಖಾಸಗಿ ಹೊಟೇಲ್ನಲ್ಲಿ ಕಾಂಗ್ರೆಸ್ ನಾಯಕರಿಂದ ಪೂರ್ವಭಾವಿ ಸಭೆ ಆರಂಭವಾಗಿದೆ.
ಜನೆವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಸಮಾವೇಶದ ಹಿನ್ನೆಲೆಯಲ್ಲಿ
ಹುಬ್ಬಳ್ಳಿಯಲ್ಲಿ ಬೆಳಗಾವಿ ಸಮಾವೇಶದ ಪೂರ್ವ ಸಿದ್ಧತಾ ಸಭೆಯನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ನಡೆದಿದೆ. ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸಚಿವರು, ಶಾಸಕರು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ.