ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂರು ಜನರಿಗೆ ದಂಡ ವಿಧಿಸಿದ ನ್ಯಾಯಾಲಯ..ದಂಡ ಪಾವತಿಸದಿದ್ದರೆ ಜೈಲು…

Share to all

ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂರು ಜನರಿಗೆ ದಂಡ ವಿಧಿಸಿದ ನ್ಯಾಯಾಲಯ..ದಂಡ ಪಾವತಿಸದಿದ್ದರೆ ಜೈಲು…

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ 1.25 ಕೋಟಿ ರೂ. ದಂಡ ವಿಧಿಸಿದೆ.

ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್‌ ದಾಖಲಿಸಿದ್ದ ಚೆಕ್​​ ಬೌನ್ಸ್​ ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಅವರು, ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಅವರಿಗೆ ಕೋರ್ಟ್ ದಂಡ ವಿಧಿಸಿದ್ದು, ಒಂದು ವೇಳೆ ಈ ದಂಡ ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದೆ.

ಉದಯ ವಾರ್ತೆ
ಬೆಂಗಳೂರು.


Share to all

You May Also Like

More From Author