ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ.ಬಿಜೆಪಿಯ 42 ಮುಖಂಡರ ಮೇಲೆ ದೂರು.

Share to all

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ.ಬಿಜೆಪಿಯ 42 ಮುಖಂಡರ ಮೇಲೆ ದೂರು.

ಹುಬ್ಬಳ್ಳಿ:-ಕರಸೇವಕ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ನಡೆದ ಪ್ರತಿಭಟನೆವೇಳೆ ಬಿಜೆಪಿ ಮುಖಂಡರು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್ ಮುಖಂಡರು ಹುಬ್ಬಳ್ಳಿ ನಗರ ಪೋಲೀಸ ಠಾಣೆಯಲ್ಲಿ 42 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಜೆಪಿ ನಾಯಕರ ವಿರುದ್ದ
ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು
ಉದಯ ವಾರ್ತೆಗೆ ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಲಬ್ಯವಾಗಿದೆ.

ಆರ್ ಅಶೋಕ್. ಶಾಸಕರಾದ ಮಹೇಶ ಟೆಂಗಿನಕಾಯಿ,ಎಂ ಆರ್ ಪಾಟೀಲ ಅರವಿಂದ ಬೆಲ್ಲದ ಸೇರಿ 42 ಜನರ ವಿರುದ್ದ ದೂರು ದಾಖಲಾಗಿದೆ.
ಜನೇವರಿ 3 ರಂದು ಶಹರ ಠಾಣೆ ಮುಂಭಾಗ ಪ್ರತಿಭಟನೆ ಮಾಡಿದ್ದ ಬಿಜೆಪಿ ನಾಯಕರು
ಬಿಜೆಪಿ ಕೋಮು ಗಲಭೆ ಸೃಷ್ಟಿ ಮಾಡಿದೆ ಎಂದು ಕೈ ನಿಯೋಗ ದೂರು ಕೊಟ್ಟ ಹಿನ್ನೆಲೆಯಲ್ಲಿ FIR ದಾಖಲಾಗಿದೆ.

ಉದಯ ವಾರ್ತೆ ಹುಬ್ಬಳ್ಳಿ.


Share to all

You May Also Like

More From Author