ಧಾರವಾಡ ನಿತ್ಯ ನಿರಂತರವಾಗಿ ಯಶಸ್ವಿಯಾಗಿ ನಡೆಯುತ್ತಿದೆ ಸಂವಿಧಾನ ಜಾಗೃೃತಿ ಜಾಥಾಗಳು – ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಮುಂದುವರೆದ ಸಂವಿಧಾನ ಜಾಗೃತಿ ಕಾರ್ಯಕ್ರಮಗಳು.
ಧಾರವಾಡ –
ರಾಜ್ಯ ಸರ್ಕಾರದ ಸೂಚನೆ ಸುತ್ತೋಲೆಯಂತೆ ರಾಜ್ಯದ ತುಂಬೆಲ್ಲಾ ಸಂವಿಧಾನ ಕುರಿತಂತೆ ಜಾಗೃತಿ ಕಾರ್ಯಕ್ರಮಗಳು ಜಾಥಾಗಳು ನಡೆಯುತ್ತಿದ್ದು ಇತ್ತ ಧಾರವಾಡ ಜಿಲ್ಲೆಯಲ್ಲೂ ಕೂಡಾ ಮುಂದುವರೆದಿವೆ.ಹೌದು ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಈ ಒಂದು ಕಾರ್ಯಕ್ರಮಗಳು ಮುಂದುವರೆದಿವೆ.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಗಳು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲೂ ಕೂಡಾ ತುಂಬಾ ಅಚ್ಚು ಕಟ್ಟಾಗಿ ನಡೆಯುತ್ತಿದ್ದು ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ಒಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ನಡೆಯುತ್ತಿವೆ.
ರಾಜ್ಯ ಸರ್ಕಾರದ ಸೂಚನೆಯಂತೆ ಧಾರವಾಡ ಜಿಲ್ಲೆಯಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತವಾದ ರಾಜ್ಯದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿವೆ.ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆ ರಾಜ್ಯದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತವಾಗಿ ಸಂವಿಧಾನ ಕುರಿತಂತೆ ಅರ್ಥಪೂರ್ಣವಾದ ಕಾರ್ಯಕ್ರಮಗಳು ಕೂಡಾ ಧಾರವಾಡ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿದ್ದು ಸಮಾಜ ಕಲ್ಯಾಣ ಇಲಾಖೆಯಿಂದ ಈ ಒಂದು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.
ಜಿಲ್ಲೆಯ ಹಲವೆಡೆ ರಾಜ್ಯ ಸರ್ಕಾರದ ಸೂಚನೆಯಂತೆ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.ಧಾರವಾಡ ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯತ್ ,ಸಮಾಜ ಕಲ್ಯಾಣ ಇಲಾಖೆಯಿಂದ ಈಗಾಗಲೇ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಂವಿಧಾನ ಜಾಗೃತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಅಲ್ಲಾಬಕಾಷ್ ಎಮ್ ಎಸ್ ಇವರ ಮಾರ್ಗದರ್ಶನದಲ್ಲಿ ಆಯಾ ತಾಲ್ಲೂಕಿನ ಇಲಾಖೆಯ ಸಹಾಯಕ ನಿರ್ದೇಶಕರು ಈ ಒಂದು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.ಪ್ರಮುಖವಾಗಿ ಮೆರವಣಿಗೆ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಡೊಳ್ಳು ಕುಣಿತ ಜಾಂಜ್ ಮೇಳ ಸೇರಿದಂತೆ ಬೇರೆ ಬೇರೆ ಜಾನಪದ ಕಲಾ ತಂಡಗಳ ಮೂಲಕ ಎಲ್ಲಾ ಬೀದಿ ಬೀದಿಗಳಲ್ಲಿ ಎಲ್ಲಾ ಗ್ರಾಮಗಳಲ್ಲಿ ಸಂವಿಧಾನ ಪ್ರಸ್ತಾವನೆ ವಾಚಿಸುವ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಅಲ್ಲದೇ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂವಿಧಾನ ಕುರಿತಂತೆ ಜಾಗೃತಿಯನ್ನು ಕೂಡಾ ಮೂಡಿಸಲಾಗುತ್ತಿದ್ದು ಇದರೊಂದಿಗೆ ಸಂವಿಧಾನ ಕುರಿತಂತೆ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲಾಗುತ್ತಿದ್ದು ಅರ್ಥಪೂರ್ಣವಾದ ಈ ಒಂದು ಕಾರ್ಯಕ್ರಮವನ್ನು ಆಯೋಜನೆ ಮಾಡಿರುವ ಕುರಿತಂತೆ ಜಿಲ್ಲೆಯ ಎಲ್ಲಾ ಗ್ರಾಮಸ್ಥರು ಕೂಡಾ ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ.ಹೀಗಾಗಿ ಈ ಒಂದು ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಮುಂದುವರೆದಿದ್ದು ಕಲಘಟಗಿ ತಾಲೂಕಿನ ಮಿಶ್ರಿಕೋಟಿ,ಸೇರಿದಂತೆ ಹಲವು ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥವನ್ನು ಸೈಕಲ್ ಜಾಥಾದ ಮೂಲಕ ಮಾಡಲಾಯಿತು.
ಪ ಪಂ ಮತ್ತು ಪ ಜಾ ಮುಖಂಡರು ಗ್ರಾಮ ಪಂಚಾಯತ್ ದಾಸ್ತಿಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸರ್ವ ಸದ್ಯಸರು ಮತ್ತು ಗ್ರಾಮಸ್ಥರು ಮತ್ತು ಸಹಾಯಕ ನಿರ್ದೇಶಕರು ಇವರು ಸೈಕಲ್ ಜಾಥಾದ ಮೂಲಕ ಚಾಲನೆ ನೀಡುತ್ತಿರುವುದು ಕಂಡು ಬಂದಿತು.ಶಾಲಾ ವಿದ್ಯಾರ್ಥಿಗಳು ಭವ್ಯವಾಗಿ ಸ್ವಾಗತಿಸಿದ್ದು ಕಂಡು ಬಂದಿತು.ಈ ಒಂದು ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.