ಜಾತ್ರೆಯ ರೂಪದಲ್ಲಿ ಸಂವಿಧಾನ ಜಾಗ್ರತಿ ಜಾಥಾ.ಹುಬ್ಬಳ್ಳಿ ತಾಲೂಕಿನ ವಿವಿಧ ಹಳ್ಳಿಗಳ್ಳಲ್ಲಿ ಸಂವಿಧಾನ ಜಾಗ್ರತಿ ಹಬ್ಬ..
ಹುಬ್ಬಳ್ಳಿ:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಧಾರವಾಡ ವತಿಯಿಂದ ಹುಬ್ಬಳ್ಳಿ ತಾಲ್ಲೂಕಿನ ಗ್ರಾಮ ಮಟ್ಟದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಇಂದು ಬೆಳಗಲಿ, ಕಟ್ನೂರ್, ಚೆನ್ನಾಪೂರ, ಅಂಚಟಗೇರಿ ಮತ್ತು ದೇವರಗುಡಿಹಾಳ ಗ್ರಾಮ ಪಂಚಾಯತ್ ಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಇಂದು ನೆಡೆದ ಜಾಗೃತ ಜಾತಾವನ್ನು ಐದೂ ಗ್ರಾಮಗಳಲ್ಲಿ ಸ್ಥಬ್ಧಚಿತ್ರದ ವಾಹನವನ್ನು ಗ್ರಾಮಸ್ಥರು ಊರಿನುದ್ದಕ್ಕೂ ತಳಿರು ತೋರಣಗಳ ಮೂಲಕ ಸೃಂಗರಿಸಿ ಬಣ್ಣಬಣ್ಣದ ರಂಗೋಲಿ ಹಾಕಿ ಆರತಿ ಬೆಳಗುವ ಮೂಲಕ ಕುಂಭಮೇಳದೊಂದಿಗೆ ಸ್ವಾಗತ ಮಾಡಿಕೊಂಡರು.
ಸ್ಥಬ್ಧಚಿತ್ರದ ಸಂಚಾರದುದ್ದಕ್ಕೂ ಸಂಬಾಳವಾಧ್ಯ, ಜಾಂಜ್ ಮೇಳ,
ಕೋಲಾಟ, ಹೆಜ್ಜೆಯ ಕುಣಿತ, ಲೇಜಿಮ್ ಕುಣಿತ, ಡೊಳ್ಳು ಕುಣಿತದಂತಹ ಮೊದಲಾದ ಹೆಜ್ಜೆಮೇಳಗಳೊಂದಿಗೆ ವಿಜೃಂಭಣೆಯಿಂದ ಶಾಲಾಮಕ್ಕಳು ಮಹನಿಯರ ವೇಷಧರಿಸಿ ಗ್ರಾಮಗಳ ಬೀದಿಗಳಲ್ಲಿ ಮೆರವಣಿಗೆ ಮಾಡುತ್ತಾ ಜನರನ್ನು ಜಾಗೃತಗೊಳಿಸಿದರು.
ಜಾಗೃತ ಜಾತಾ ಸ್ಥಬ್ಧಚಿತ್ರ ಸಂಚರಿಸಿದ ಪ್ರತಿ ಗ್ರಾಮಗಳಲ್ಲಿ ಸೈಕಲ್ ರ್ಯಾಲಿ, ಬೈಕ್ ರ್ಯಾಲಿ,
ಟ್ರಾಕ್ಟರ್ ರ್ಯಾಲಿ, ಎತ್ತಿನಬಂಡಿ ರ್ಯಾಲಿ ಮಾಡುವುದರೊಂದಿಗೆ ವೇದಿಕೆ ಕಾರ್ಯಕ್ರಮ ಆಯೋಜಿಸಿ ಗಣ್ಯರಿಂದ
ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಿವಾನಂದ ಜವಳಿ ರವರು ಬೆಳಗಲಿ ಯಲ್ಲಿ
ಹುಬ್ಬಳ್ಳಿ ತಾಲ್ಲೂಕಿನ ನೌಕರರ ಸಂಘದ ಅಧ್ಯಕ್ಷರಾದ ಡಾ.ಪ್ರಹ್ಲಾದ ಗೆಜ್ಜಿ ರವರು ಕಟ್ನೂರ ಮತ್ತು ಅಂಚಟಗೇರಿ ನಲ್ಲಿ
ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಶ್ರೀ ಎಸ್.ವ್ಹಿ. ಬಂಗಾರಿಮಠ ರವರು ಚೆನ್ನಾಪೂರ ಮತ್ತು ದೇವರಗುಡಿಹಾಳ ದಲ್ಲಿ ಉಪನ್ಯಾಸದ ನೀಡಿದರು.
ಜಗಜ್ಯೋತಿ ಬಸವಣ್ಣನವರ ಸಾಮಾಜಿಕ ಚಿಂತನೆಗಳನ್ನು
ಡಾ. ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದಲ್ಲಿ ಯಾವರೀತಿ ಅಳವಡಿಸಿದ್ದಾರೆ ಎಂಬುದರ ಬಗ್ಗೆ, ಮೂಲಭೂತ ಹಕ್ಕು ಮತ್ತು ಕರ್ತವ್ಯ ಗಳ ಬಗ್ಗೆ ಮನಮುಟ್ಟುವಂತೆ ಮಾತನಾಡಿದರು.
ಶಾಲಾಮಕ್ಕಳಿಂದ ವಿವಿಧ ನೃತ್ಯ, ದೇಶಭಕ್ತಿಗೀತೆ, ಕಿರುನಾಟಕ, ಏಕಾಭಿನಯ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ತಹಶೀಲ್ದಾರ ಶ್ರೀ ಪ್ರಕಾಶ ನಾಶಿ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ರಾಮಚಂದ್ರ ಹೊಸಮನಿ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ
ಶ್ರೀಮತಿ ಚೆನ್ನಮ್ಮ ಅಂಬಿಗೇರ, ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಮಸ್ತ ನೌಕರರು, ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಗ್ರಾಮಗಳ ಗುರುಹಿರಿಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘಟನೆಗಳ ಮುಖಂಡರು ಗ್ರಾಮಸ್ಥರು ಅಪಾರ ಸಂಖ್ಯೆಯ ಶಾಲಾಮಕ್ಕಳು ಭಾಗವಹಿಸಿ ಇಂದಿನ ಸಂವಿಧಾನ ಜಾಗೃತಾ ಜಾಥಾ ಕಾರ್ಯಕ್ರಮ ವನ್ನು ಸಂವಿಧಾನದ ಹಬ್ಬವನ್ನಾಗಿ, ಜಾತ್ರೆಯ ರೂಪದಲ್ಲಿ ಆಚರಿಸಿದರು.