ಟಿಕೆಟ್ ಗೊಂದಲ ಏನಿಲ್ಲ, ಎಲ್ಲ ವರ್ಗದವರ ಬೆಂಬಲ ನನಗಿದೆ. ಧಾರವಾಡ ಕ್ಷೇತ್ರದಲ್ಲಿ ಚುನಾವಣೆ ತಯಾರಿ ನಡೆಸಿದ್ದೇನೆ ಪ್ರಹ್ಲಾದ ಜೋಶಿ.

Share to all

ಟಿಕೆಟ್ ಗೊಂದಲ ಏನಿಲ್ಲ, ಎಲ್ಲ ವರ್ಗದವರ ಬೆಂಬಲ ನನಗಿದೆ.
ಧಾರವಾಡ ಕ್ಷೇತ್ರದಲ್ಲಿ ಚುನಾವಣೆ ತಯಾರಿ ನಡೆಸಿದ್ದೇನೆ ಪ್ರಹ್ಲಾದ ಜೋಶಿ.

ಹುಬ್ಬಳ್ಳಿ: ಧಾರವಾಡ ಲೋಕಸಭೆ ಚುನಾವಣೆಗೆ ಕ್ಷೇತ್ರದಲ್ಲಿ ಈಗಾಗಲೇ ತಯಾರಿ ನಡೆಸಿದ್ದೇನೆ. ನಮ್ಮಲ್ಲಿ ಗೊಂದಲ ಏನಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ಮಾದ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಎಲ್ಲಾ ವರ್ಗದ ಜನರ ಬೆಂಬಲ ಇದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯೇ ಇರಲಿ ಯಾವುದೇ ಚುನಾವಣೆ ಇರಲಿ, ಎಲ್ಲಿ? ಯಾರಿಗೆ? ಟಿಕೆಟ್ ಕೊಡಬೇಕು ಎಂಬುದನ್ನು ಬಿಜೆಪಿಯಲ್ಲಿ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.

ಧಾರವಾಡ ಕ್ಷೇತ್ರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ತಾವು ಚುನಾವಣಾ ಪೂರ್ವ ತಯಾರಿ ಮಾಡಿದ್ದೇವೆ. ಎಲ್ಲ ವರ್ಗದವರ ಬೆಂಬಲವೂ ಸಿಕ್ಕಿದೆ ಎಂದು ತಿಳಿಸಿದರು.

ಉದಯ ವಾರ್ತೆ


Share to all

You May Also Like

More From Author