ಕಾಂಗ್ರೆಸ್ ಸರಕಾರ ಪತನಕ್ಕೆ ಬಿಜೆಪಿ ಮಹಾ ಪ್ಲ್ಯಾನ್.ಲೋಕಸಭಾ ಚುನಾವಣೆ ನಂತರ ಕರ್ನಾಟಕದಲ್ಲಿ ಸರಕಾರ ಪತನ ಏಕನಾಥ ಶಿಂಧೆ.
ಮುಂಬೈ: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸತಾರಾದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ. ನಾನು ಇತ್ತಿಚೇಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲಿಯೂ ‘ನಾಥ’ ಆಪರೇಷನ್ ಮಾಡೋದಿದೆ’ ಅಂದಿದ್ದಾರೆ. ‘ನಾಥ ಆಪರೇಷನ್’ ಅಂದ್ರೆ ಏನು..? ಅಂತ ಕೇಳಿದೆ. ಆಗ ಅವರು, ನೀವು ಮಹಾರಾಷ್ಟ್ರದ ಮಹಾಘಟಬಂಧನ ಸರ್ಕಾರ ಪತನ ಮಾಡಿದ್ರಿ. ಹೀಗಾಗಿ ನಿಮ್ಮ ಅನುಭವ ನಮಗೆ ಬಹಳ ಅವಶ್ಯಕವಿದೆ ಎಂದರು. ಖಂಡಿತವಾಗಿಯೂ ನಾನು ಬರುತ್ತೇನೆ ಎಂದು ಹೇಳಿದ್ದೇನೆ ಅಣತಾ ಇಂದು ಶಿಂಧೆ ಹೇಳುವ ಮೂಲಕ ಅಪರೇಷನ್ ಸುಳಿವು ಕೊಟ್ಟಿದ್ದಾರೆ.
ಒಟ್ಟಿನಲ್ಲಿ ಲೋಕಸಭಾ ಚುನಾವಣೆಯ ಬ್ಯುಸಿಯಲ್ಲಿರುವ ನಾಯಕರಿಗೆ ಇದೀಗ ಆಪರೇಷನ್ ಸುಳಿವು ತಲೆಕೆಡಿಸುವಂತೆ ಮಾಡಿದೆ. ಈಗಾಗಲೇ ಸಿದ್ದರಾಮಯ್ಯ ಸರ್ಕಾರ ಪತನದ ಭವಿಷ್ಯ ನುಡಿದಿರುವ ಮೈತ್ರಿ ನಾಯಕರಿಗೆ 136+ ಇರುವ ಕಾಂಗ್ರೆಸ್ ಸರ್ಕಾರ ಕೆಡವೋದು ಅಷ್ಟು ಸುಲಭನಾ.. ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.