ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕುಶಾಲ್ ಅಧಿಕಾರ ಸ್ವೀಕಾರ.ಕಮೀಷನರ್ ರೇಣುಕಾ ಸುಕುಮಾರರಿಂದ ಅಭಿನಂದನೆ.
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ನ ನೂತನ ಉಪ ಪೊಲೀಸ್ ಆಯುಕ್ತರಾಗಿ (ಕಾನೂನು & ಸುವ್ಯವಸ್ಥೆ) ಕುಶಾಲ್ವ ಚೌಕ್ಸೆ ಐಪಿಎಸ್ ಸೋಮವಾರ ಅಧಿಕಾರಿ ಇಂದು ಅಧಿಕಾರ ವಹಿಸಿಕೊಂಡರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು.
ಕುಶಾಲ್ ಚೌಕ್ಸ್ 2018ನೇ ಬ್ಯಾಚ್ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಯಾಗಿದ್ದು, ಬೆಂಗಳೂರಿನ ವಿಧಿವಿಜ್ಞಾನ ಪ್ರಯೋ ಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರನ್ನು ಈಗ ಹುಬ್ಬಳ್ಳಿ ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಡಿಸಿಪಿ ಎಂ.ರಾಜೀವ್ ಅವರ ಅಮಾನತು ಹಿನ್ನೆಲೆ ಕುಶಾಲ್ ಅವರನ್ನು ರಾಜ್ಯ ಸರ್ಕಾರ ಇಂದು ನೇಮಕ ಮಾಡಿ ಆದೇಶ ಹೊರಡಿಸಿತ್ತು.