ಗಣೇಶ ವಿಸರ್ಜನೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಬಲಿ – ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಲಿಯಾದ ಯುವಕ ಕೊಪ್ಪಳ –

Share to all

ಗಣೇಶ ವಿಸರ್ಜನೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಬಲಿ – ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಲಿಯಾದ ಯುವಕ

ಕೊಪ್ಪಳ –

ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್ ಗೆ ಯುವಕನೊರ್ವ ಬಲಿಯಾದ ಘಟನೆ ಕೊಪ್ಪಳ ದಲ್ಲಿ ನಡೆದಿದೆ.ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಯುವಕನಿಗೆ ಹೃದಯಾಘಾತವಾಗಿದೆ.ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದ ಯುವಕ ಸಾವಿಗೀಡಾಗಿದ್ದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಈ ಒಂದು ಘಟನೆ ನಡೆದಿದೆ.21 ದಿನದ ಗಣೇಶ ವಿಸರ್ಜನೆ ವೇಳೆ ಈ ಒಂದು ಘಟನೆ ನಡಿದಿದೆ.ಸುದೀಪ್ ಸಜ್ಜನ್(30) ಹೃದಯಾಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ.ಗಂಗಾವತಿಯ ಪ್ರಶಾಂತ ನಗರದ ಯುವಕರಿಂದ ಆಯೋಜನೆ ಮಾಡಿದ್ದ ಡಿಜೆ ಮೆರವಣಿಗೆ..ಮೆರವಣಿಗೆ ಸಾಗುತ್ತಿದ್ದ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಸುದೀಪ್. ಘಟನೆಯಿಂದ ಸ್ವಯಂ ಪ್ರೇರಿತವಾಗಿ ಅರ್ಧಕ್ಕೆ ಡಿಜೆ ಬಂದ್ ಮಾಡಿದ್ದಾರೆ. ಯುವಕರು.ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಯಿತು.ಡಿಜೆ ವಶಕ್ಕೆ ಪಡೆದ ಗಂಗಾವತಿ ನಗರ ಠಾಣೆ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉದಯ ವಾರ್ತೆ ಕೊಪ್ಪಳ


Share to all

You May Also Like

More From Author