ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕ ಜಾರಿಗೆ ಆಗ್ರಹ.ಕರವೇ ಜಿಲ್ಲಾದ್ಯಕ್ಷ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಪ್ರತಿಭಟನೆ.
ಹುಬ್ಬಳ್ಳಿ:- ರಾಜ್ಯ ಸರಕಾರ ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕ ಜಾರಿಗೊಳಿಸಲೇಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ಕರವೇ ಜಿಲ್ಲಾದ್ಯಕ್ಷ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಲ್ಲದೇ ಕರ್ನಾಟಕದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿರೋಧಿಸುತ್ತಿರುವ ಉದ್ಯಮಿಗಳಿಗೆ ದಿಕ್ಕಾರ ಕೂಗಿದ ಕರವೇ ಕಾರ್ಯಕರ್ತರು ಕನ್ನಡಿಗರ ಮೀಸಲಾತಿ ವಿರೋಧಿಸಬೇಡಿ,ವಿರೋಧಿಸಿದರೆ ಕರವೇ ಕಾರ್ಯಕರ್ತರು ಸುಮ್ಮನಿರುವುದಿಲ್ಲಾ ಅಂತಾ ಉದ್ಯಮಿಗಳಿಗೆ ಎಚ್ಚರಿಕೆ ನೀಡಿದರು.