ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಸ್…ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಪ್.. ವಿಚಾರಣೆ ಸೆ.9ಕ್ಕೆ ಮುಂದೂಡಿಕೆ.
ಬೆಂಗಳೂರು:-ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ಆದೇಶವನ್ನು ವಜಾ ಮಾಡುವಂತೆ ಕೋರಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ ಅರ್ಜಿಯ ಮುಂದುವರೆದ ವಿಚಾರಣೆ ಇಂದು ಕರ್ನಾಟಕ ಹೈಕೋಟ್೯ ನಡೆಸಿದ್ದು ಮುಂದಿನ ವಿಚಾರಣೆಯನ್ನು ಸೆ.9 ಕ್ಕೆ ಮುಂದೂಡಿದೆ.
ಅಡ್ವೋಕೇಟ್ ಜನರಲ್ ಕೋರಿಕೆಯಂತೆ ನ್ಯಾ ಎಂ ನಾಗಪ್ರಸನ್ ಅವರ ಪೀಠವು ಸುದೀರ್ಘ ಪ್ರತಿವಾದವನ್ನು ಆಲಿಸಿ ವಿಚಾರಣೆಯನ್ನು ಮುಂದೂಡಿ ಆದೇಶ ನೀಡಿದೆ.