ನನ್ನನ್ನು ಬಿಟ್ಟುಬಿಡಿ ಪ್ಲೀಸ್: ಶೆಡ್ʼನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್!

Share to all

ಬೆಂಗಳೂರು: ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿರುವ ರೇಣುಕಾಸ್ವಾಮಿ ಕೊಲೆ ಕೇಸ್‌ನ ಒಂದೊಂದು ಸತ್ಯವೇ ಭಯಾನಕ ಮತ್ತು ಘನಘೋರವಾಗಿದೆ. ತನಿಖೆ ನಡೆಸಿದ ಪೊಲೀಸರು 3991 ಪುಟಗಳಲ್ಲಿ ದರ್ಶನ್ ಗ್ಯಾಂಗ್‌ನ ಅಟ್ಟಹಾಸವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸದ್ಯಕ್ಕೆರೇಣುಕಾಸ್ವಾಮಿಯ ಶೆಡ್ ನಲ್ಲಿದ್ದ ಫೋಟೋ ಒಂದು ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ಅನೇಕರು ಮರುಕ ಪಡುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ ಬಳಿಕ ಡಿಲೀಟ್​​ ಮಾಡಿದ್ದ ಫೋಟೋಗಳನ್ನು ಪೊಲೀಸರು ಆರೋಪಿಗಳ ಮೊಬೈಲ್​ನಿಂದ ರಿಟ್ರೀವ್​ ಮಾಡಿದ್ದಾರೆ. 10ಕ್ಕೂ ಹೆಚ್ಚು ಫೋಟೋ ರಿಟ್ರೀವ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಕೊಲೆಗೂ ಮುನ್ನ ವಿನಯ್ ಮೊಬೈಲ್​ನಲ್ಲಿ ಸೆರೆಯಾದ ರೇಣುಕಾಸ್ವಾಮಿ ಫೋಟೋಸ್ ಪತ್ತೆಯಾಗಿತ್ತು. ಆರೋಪಿ ವಿನಯ್ ಮೊಬೈಲ್​​ನಲ್ಲಿ ಫೋಟೋ ಕ್ಲಿಕ್ಕಿಸಿ ಡಿಲೀಟ್ ಮಾಡಿದ್ದನು. ಡಿಲೀಟ್ ಆದ ಫೋಟೋಗಳನ್ನ FSL ಟೀಂ ​ರಿಟ್ರೀವ್ ಮಾಡಿದೆ.

ಕಿಡ್ನಾಪ್ ಮಾಡಿದ ಬಳಿಕ ರೇಣುಕಾಸ್ವಾಮಿಯನ್ನ ಶೆಡ್​ಗೆ ಕರೆತಂದಿದ್ದರು. ಆರೋಪಿಗಳಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ಮಾಡಿದ್ದರು. ಪವನ್, ಧನರಾಜ್ ಮತ್ತು 5 ಮಂದಿಯಿಂದ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ಬಳಿಕ ಎಲೆಕ್ಟ್ರಿಕ್ ಮೆಗ್ಗರ್​ನಿಂದ ಆತನ ಕೈಗಳಿಗೆ ಬರೆ ಹಾಕಿದ್ದಾರೆ. ಶೆಡ್​ನಲ್ಲಿ ನಿಲ್ಲಿಸಿದ್ದ ವಾಹನಗಳ ಬಳಿ ಚೆನ್ನಾಗಿ ಹೊಡೆದು ಅಲ್ಲೇ ಬಿಸಾಡಿದ್ದಾರೆ ಎನ್ನಲಾಗುತ್ತಿದೆ.

ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡುವಾಗ ಚಿರಾಡಿದ್ದಾನಂತೆ. ಅದೇ ವೇಳೆ ಅಟ್ಟಹಾಸದಲ್ಲಿ ಆರೋಪಿಗಳು ಕೂಗಾಡಿದ್ದಾರಂತೆ. ಈ ವೇಳೆ ಗೇಟ್ ಹೊರಗಿದ್ದ ಸೆಕ್ಯೂರಿಟಿ ಒಳಗೆ ಬಂದಿದ್ದಾರೆ. ಹಲ್ಲೆ ಮಾಡಿದನ್ನ ಸೆಕ್ಯೂರಿಟಿ ಗಾರ್ಡ್ ಕಣ್ಣಾರೆ ನೋಡಿದ್ದಾರೆ. ಬಳಿಕ ತಕ್ಷಣ ವಿನಯ್​ಗೆ ಫೋನ್​ ಮಾಡಿದ್ದಾನೆ ಎನ್ನಲಾಗುತ್ತಿದೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ಸೆಕ್ಯೂರಿಟಿ ಗಾರ್ಡ್ ಐ ವಿಟ್ನೇಸ್ ಆಗಿದ್ದು, ಈ ವೇಳೆ ವಿನಯ್ ಅವರು ನಮ್ಮವರೇ ಬಿಡು ಎಂದು ಸೆಕ್ಯೂರಿಟಿ ಗಾರ್ಡ್​ ಬಳಿ ಹೇಳಿದ್ದಾನಂತೆ. ನಂತರ ರೇಣುಕಾಸ್ವಾಮಿ ಫೋಟೋ ಕಳಿಸುವುದಕ್ಕೆ ವಿನಯ್ ಹೇಳಿದ್ದಾನೆ. ಆಗ ಸೆಕ್ಯೂರಿಟಿ ಫೋಟೋ ತೆಗೆದು ವಿನಯ್​​ಗೆ ಕಳಿಸಿದ್ದಾನೆ. ವಿನಯ್ ಆ ಫೋಟೋಗಳನ್ನ ನಟ ದರ್ಶನ್​ಗೆ ತೋರಿಸಿದ್ದಾನೆ. ಫೋಟೋಸ್​ ನೋಡಿದ ಬಳಿಕ ದರ್ಶನ್ ಶೆಡ್​ಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಗಾಯಗೊಂಡ ರೇಣುಕಾಸ್ವಾಮಿ ಅಂಗಲಾಚ್ತಿರೋ ಫೋಟೋ ರಿಟ್ರೀವ್​ ಬಳಿಕ ಸಿಕ್ಕಿದೆ. ತನ್ನ ಬಿಟ್ಟು ಬಿಡುವಂತೆ ಬೇಡಿಕೊಂಡತೆ ಫೋಟೋ ಕಾಣಿಸಿದೆ. ತಪ್ಪಾಯ್ತು ಎಂದು ಅಳುತ್ತಿರುವ ಮತ್ತು ಮೈಮೇಲೆ ಹಾಕಿದ್ದ ಆತನ ಬನಿಯನ್ ಸಹ ಕಿತ್ತು ಹಾಕಿರುವುದನ್ನು ಫೋಟೋಗಳಲ್ಲಿ ಕಂಡಿವೆ.

ಆರೋಪಿ ದರ್ಶನ್ ಶೆಡ್​ಗೆ ಬಂದು ರೇಣುಕಾಸ್ವಾಮಿ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಕೆಳಗೆ ಬಿದ್ದವನನ್ನ ಎಳೆದು ಹೊಡೆದು ಬನಿಯನ್ ಹರಿದುಹಾಕಿದ್ದಾರೆ. ಶೆಡ್​ಗೆ ಬಂದವನೇ ರೇಣುಕಾಸ್ವಾಮಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಸಿನಿಮಾ ರೀತಿಯಲ್ಲಿ ಎತ್ತಿ ಬಿಸಾಡಿ ತುಳಿದಿದ್ದಾರೆ ಎನ್ನಲಾಗುತ್ತಿದೆ.ರೇಣುಕಾಸ್ವಾಮಿ ಮುಖಕ್ಕೆ ಶೂ ಕಾಲಿನಿಂದ ಒದ್ದಿದ್ದಾನೆ ಎಂದು ಹೇಳಲಾಗುತ್ತಿದೆ.

 


Share to all

You May Also Like

More From Author