ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ ಹುಡುಗನಿಗೆ ಬಸ್‌ ಡಿಕ್ಕಿ! ಭೀಕರ ಅಪಘಾತ ದೃಶ್ಯ CCTVಯಲ್ಲಿ ಸೆರೆ

Share to all

ಬೆಳಗಾವಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್​​ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಬಂಡರಗರ್ (10 ವರ್ಷ) ಮೃತ ದುರ್ದೈವಿ. ಸುನೀಲ್​ ಬಂಡರಗರ್​​ ಅಥಣಿ ಪಟ್ಟಣದಲ್ಲಿನ ಗಲಗಲಿ ಆಸ್ಪತ್ರೆ ಬಳಿಯ ಟ್ಯೂಷನ್​ಗೆ ಬಂದಿದ್ದನು. ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಯಂದು ಸುನೀಲ್​ ಬಂಡರಗರ್ ಗೆಳೆಯರ ಜೊತೆ ರಸ್ತೆ ಬದಿ ನಿಂತಿದ್ದನು.

ಈ ವೇಳೆ ಅಥಣಿಯಿಂದ ಕಾರವಾರಕ್ಕೆ ಹೊರಟಿದ್ದ ಸರ್ಕಾರಿ ಬಸ್ ಹುಡುಗರ ಮೇಲೆ ಬರುತ್ತಿತ್ತು. ಇದನ್ನು ಗಮನಿಸಿದ ಸುನೀಲ್​ ಬಂಡರಗರ್ ಗೆಳೆಯರು ಹಿಂದಕ್ಕೆ ಸರಿದಿದ್ದಾರೆ. ಆದರೆ, ಸುನೀಲ್​ ಬಂಡರಗರ್ ಹಿಂದೆ ಸರೆಯುವಷ್ಟರಲ್ಲಿ ಬಸ್​ ಹರಿದಿದೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 


Share to all

You May Also Like

More From Author