ನವದೆಹಲಿ: ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಲು ಸಾಧ್ಯವಾಗದ ಬಡ ವಿದ್ಯಾರ್ಥಿಗೆ ಪ್ರವೇಶ ನೀಡುವಂತೆ ಐಐಟಿ ಧನ್ಬಾದ್ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಶುಲ್ಕದ ವಿಷಯದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗೆ ಸೀಟು ವಂಚಿತಗೊಳಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿದೆ.
ಅತುಲ್ ಕುಮಾರ್ಎಂಬ ವಿದ್ಯಾರ್ಥಿ ಜಾರ್ಖಂಡ್ನಲ್ಲಿನ ಐಐಟಿ ಧನ್ಬಾದ್ನಲ್ಲಿ ಪ್ರವೇಶ ಪಡೆಯಲು ಎಲ್ಲಾ ಪರೀಕ್ಷೆ ಎದುರಿಸಿದ್ದ. ಆದರೆ ಕೊನೆಯ ದಿನದ ಒಳಗೆ ಶುಲ್ಕ ಪಾವತಿ ಮಾಡಲು ಆಗಿರಲಿಲ್ಲ. ಹೀಗಾಗಿ ಇವರ ಪ್ರವೇಶವನ್ನು ಐಐಟಿ ನಿರಾಕರಿಸಿತ್ತು. ಇದನ್ನು ವಿರೋಧಿಸಿ ಅತುಲ್ ಕುಟುಂಬವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಇದರ ವಿಚಾರಣೆ ನಡೆಸಿದ ಪೀಠ, ಶುಲ್ಕ ಕಾರಣ ಇಂಥ ಪ್ರತಿಭಾವಂತ ವಿದ್ಯಾರ್ಥಿ ಹೊರ ಹೋಗಲು ನಾವು ಬಿಡಬಾರದು. ಅವಕಾಶದಿಂದ ವಂಚಿತನಾಗಲು ಅನುವು ಮಾಡಿಕೊಡಬಾರದು. ಹೀಗಾಗಿ ಸಂವಿಧಾನದ 142ರ ವಿಶೇಷ ಅಧಿಕಾರದ ಅಡಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಲು ಐಐಟಿ ಧನಬಾದ್ಗೆ ಆದೇಶ ಹೊರಡಿಸಲಾಗುವುದು ಎಂದು ಹೇಳಿತು.
ಉತ್ತರ ಪ್ರದೇಶದ ಮುಜಫ್ಫರ್ನಗರದ ಕೂಲಿ ಕಾರ್ಮಿಕನ ಮಗ 18 ವರ್ಷದ ಅತುಲ್ ಕುಮಾರ್ ಎನ್ನುವ ದಲಿತ ಯುವಕ ಧನಬಾದ್ ಐಐಟಿಯಲ್ಲಿ ಸೀಟ್ ಪಡೆದುಕೊಂಡಿದ್ದ. ಆದರೆ ಕಾಲೇಜಿಗೆ 17,500 ರು. ಹಣವನ್ನು ಠೇವಣಿ ರೂಪದಲ್ಲಿ ಕಟ್ಟಬೇಕಿತ್ತು. ಬಡ ಕುಟುಂಬದ ಈ ಯುವಕನಿಗೆನಿಗದಿತ ಸಮಯದೊಳಗೆ ಹಣವನ್ನು ಕಟ್ಟುವುದಕ್ಕೆ ಸಾಧ್ಯವಾಗದೇ ಐಐಟಿ ಪ್ರವೇಶದ ಅವಕಾಶ ಕೈ ತಪ್ಪಿ ಹೋಗಿತ್ತು.