ಮೋಸ, ಮೋಸ: ಬಿಗ್ ಬಾಸ್ ಮನೆಯಲ್ಲಿ ಆಟ ಆಡದಿರಲು ನಿರ್ಧರಿಸಿದ ಗೋಲ್ಡ್ ಸುರೇಶ್! ಅಂತದ್ದೇನಾಯ್ತು!

Share to all

ಬಿಗ್ ಬಾಸ್ ಸೀಸನ್ 11 ಸಖತ್ ಮನರಂಜನೆಯಿಂದ ಮೂಡಿ ಬರುತ್ತಿದೆ. ಅದರಂತೆ ಪ್ರತಿ ಸೀಸನ್ ನಂತೆಯೇ ಜಗಳ, ಕಿರಿಕ್ ಸಾಮಾನ್ಯವಾಗಿದೆ. ಹಾಗೆ ಬಿಗ್​ ಬಾಸ್​​ ಮನೆಯ ಕ್ಯಾಪ್ಟನ್​ ಹಂಸಾ ಅವರಿಗೆ ಟಾಸ್ಕ್​ವೊಂದನ್ನು ನೀಡಿದ್ದರು. ‘ಗೊಬ್ಬರದ ಅಬ್ಬರ’ ಎಂಬ ಟಾಸ್ಕ್​ ಮೂಲಕ ಮನೆ ಮಂದಿಯನ್ನು ಆಟವಾಡಿಸಲು ಹೇಳಿದ್ದರು. ಆದರೆ ಈ ಆಟದಲ್ಲಿ ಪ್ರತಿಸ್ಪರ್ಧಿಗಳು ಕ್ಯಾಪ್ಟನ್​ ಹಂಸಾ ಅವರ ನಡೆಯನ್ನು ಕಂಡು ಮೋಸ ಎಂದು ಹೇಳಿದ್ದಾರೆ.

ಬಿಗ್​ ಬಾಸ್​ ಕೊಟ್ಟ ಗೊಬ್ಬರದ ಅಬ್ಬರ ಟಾಸ್ಕ್​ನಲ್ಲಿ ಸ್ಪರ್ಧಿಗಳ ಕೈ -ಕಾಲಿಗೆ ಬಿಗಿಯಾಗಿ ಕಟ್ಟಲಾಗಿರುತ್ತದೆ. ಸ್ಪರ್ಧಿಗಳು ಬಣ್ಣದ ಚೆಂಡನ್ನು ತಳ್ಳಿಕೊಂಡು ಮೀಸಲಿಡುವ ಸ್ಟ್ಯಾಂಡ್​ನಲ್ಲಿ ಇಡಬೇಕು. ಆದರೆ ಟಾಸ್ಕ್​ ವೇಳೆ ಕೆಲವರು ಕೈಯಲ್ಲಿ ಚೆಂಡನ್ನು ಎತ್ತಿಕೊಂಡು ಹೋದರೆ, ಇನ್ನು ಕೆಲವರು ಜಂಪ್​ ಮಾಡಿಕೊಂಡು ಹೋಗಿದ್ದಾರೆ. ಇದನ್ನು ಕಣ್ಣಾರೆ ಕಂಡರೂ ಸುಮ್ಮನಿದ್ದ ಕ್ಯಾಪ್ಟನ್​ ವಿರುದ್ಧ ಪ್ರತಿಸ್ಪರ್ಧಿಗಳು ಕಿಡಿಕಾರಿದ್ದಾರೆ. ಪಂದ್ಯದ ರೂಲ್ಸ್​ ವಿಚಾರವಾಗಿ ಮಾತಿನ ಚಕಮಕಿ ಕೂಡ ನಡೆದಿದೆ. ಗೋಲ್ಡ್​ ಸುರೇಶ್​ ಹಂಸಾ ನಡೆಯನ್ನು ವಿರೋಧಿಸಿದ್ದಾರೆ.

ಹಂಸಾ ರೂಲ್ಸ್​ ವಿಚಾರವಾಗಿ ಮಾತನಾಡಿದ ಗೋಲ್ಡ್​​ ಸುರೇಶ್, ಬಿಗ್​ ಬಾಸ್​ ನಾವಿನ್ನು ಯಾವ ಆಟ ಕೂಡ ಆಡಲ್ಲ. ಮೋಸ, ಅನ್ಯಾಯ ಎಂದು ಹೇಳಿದ್ದಾರೆ. ಅತ್ತ ಚೈತ್ರಾ ಕುಂದಾಪುರ ಯಾವ ಸೀಮೆ ಕ್ಯಾಪ್ಟನ್​ ನೀವು? ಎಂದು ಕಿಡಿಕಾರಿದ್ದಾರೆ. ಜಗದೀಶ್​ ಕೂಡ ಹಂಸಾ ವಿರುದ್ಧ ತಿರುಗಿ ಬಿದ್ದಿದ್ದು, ಅವರ ಜೊತೆಗೆ ಊಟ ಮಾಡುವುದಾದರೆ ಮನೆಗೆ ಹೋಗಿ ಋಣ ತೀರಿಸಿ ಆಟದಲ್ಲಲ್ಲ ಎಂದು ಹೇಳಿದ್ದಾರೆ


Share to all

You May Also Like

More From Author