BREAKING.. ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ! ನಾಳೆ ನಾಮಪತ್ರ ಸಲ್ಲಿಕೆ

Share to all

ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ರಾತ್ರಿ ಕಳೆದು ಬೆಳಗಾಗುವುದರೊಳಗೆ ಚಿತ್ರಣವೇ ಬದಲಾಗಿದೆ. ಬಿಜೆಪಿ ತೊರೆದು ಸೈನಿಕ ‘ಕೈ’ ಹಿಡಿದಿದ್ದಾರೆ. ಬೊಂಬೆನಾಡಿನ ಟಿಕೆಟ್‌ ಯೋಗೇಶ್ವರ್‌ಗೆ ಕೊಟ್ಟು ಡಿ.ಕೆ ಶಿವಕುಮಾರ್ ಸಹೋದರರು ದೋಸ್ತಿಗೆ ಚೆಕ್ ಮೇಟ್ ಇಟ್ಟಿದ್ದಾರೆ.

ಇದರ ಬೆನ್ನಲ್ಲೇ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯನ್ನು ಜೆಡಿಎಸ್‌ ಕಣಕ್ಕೆ ಇಳಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ  ನೇತೃತ್ವದಲ್ಲಿ ಜೆಡಿಎಸ್‌ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ.ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ‌ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.


Share to all

You May Also Like

More From Author