ಹಿಂದೂ ದೇವರನ್ನು ಕೆಟ್ಟದಾಗಿ ನಿಂದಿಸಿದ ಮುಸ್ಲಿಂ ವ್ಯಕ್ತಿ: ಕ್ರಮಕ್ಕೆ ಆಗ್ರಹಿಸಿ ದೂರು ದಾಖಲು!

Share to all

ಬೆಂಗಳೂರು:- ಹಿಂದೂ ದೇವರುಗಳ ಬಗ್ಗೆ ಅವಹೇಳಕಾರಿಯಾಗಿ ಕಾಮೆಂಟ್ ಮಾಡಿದ ಕಿಡಿಗೇಡಿಯ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ದೇವರ ನಿಂದಿಸಿದ ಕಾಮೆಂಟ್ ಸ್ಕ್ರೀನ್ ಶಾಟ್ ವೈರಲ್ ಆದ ಬೆನ್ನಲ್ಲೇ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.

ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್​ ಮಾಡಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

ಈ ವಿಚಾರವಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಅಂಜುಮ್ ಶೇಖ್ ಎಂಬಾತ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಕೊಲ್ಲೂರು ಮೂಕಾಂಬಿಕೆ, ತಿರುಪತಿ ತಿಮ್ಮಪ್ಪ ಮತ್ತು ಗಣೇಶ ದೇವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಈ ಕಾಮೆಂಟ್​ನಿಂದ ನಮಗೆ ಅತ್ಯಂತ ನೋವುಂಟು ಆಗಿದೆ ಇಂತವರ ಮೇಲೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.


Share to all

You May Also Like

More From Author