ಕಾಂಗ್ರೆಸ್ ನಾಯಕಿಶ್ರೀಮತಿ ವೀಣಾ ಕಾಶಪ್ಪನವರ ಅವರಿಗೆ ಪ್ರಶಸ್ತಿ. ಎಮರ್ಜಿಂಗ್ ಲೀಡರ್ ಭರವಸೆಯ ನಾಯಕಿ ಪ್ರಶಸ್ತಿ.
ಬೆಂಗಳೂರಿನ ಖಾಸಗಿ ಹೋಟೆಲ್’ನಲ್ಲಿ ವಿಸ್ತಾರ ಸುದ್ದಿ ವಾಹಿನಿಯ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಾಗಲಕೋಟ ಜಿಲ್ಲಾ ಪಂಚಾಯತನ ಮಾಜಿ ಅಧ್ಯಕ್ಷರು, ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಅವರ ರಾಜಕೀಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ “ಎಮರ್ಜಿಂಗ್ ಲೀಡರ್ ಭರವಸೆಯ ನಾಯಕಿ” ಎಂಬ ಪ್ರಸ್ತಿಯನ್ನು ವಿಧಾನ ಪರಿಷತ್ ಸಭಾಪತಿಗಳಾದ ಮಾನ್ಯ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಪ್ರಶಸ್ತಿ ನೀಡಿ ಶುಭಕೋರಿದರು.
ಪ್ರಶಸ್ತಿ ಲಭಿಸಿದ್ದಕ್ಕೆ ಅವರ ಅಭಿಮಾನಿ ಬಳಗದವರು ಸಂತಸ ವ್ಯಕ್ತಪಡಿಸಿದ್ದಾರೆ.