ಧಾರವಾಡ ಜಿಲ್ಲೆಯಲ್ಲಿ ಮುಂದುವರೆದ ಸಂವಿಧಾನ ಜಾಗೃತಿ ಜಾಥಾ. ಮಡಕಿಹೊನ್ನಿಹಳ್ಳಿ,ದಾಸ್ತಿಕೊಪ್ಪ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ.

Share to all

ಧಾರವಾಡ ಜಿಲ್ಲೆಯಲ್ಲಿ ಮುಂದುವರೆದ ಸಂವಿಧಾನ ಜಾಗೃತಿ ಜಾಥಾ. ಮಡಕಿಹೊನ್ನಿಹಳ್ಳಿ,ದಾಸ್ತಿಕೊಪ್ಪ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ.

ಧಾರವಾಡ -ರಾಜ್ಯ ಸರ್ಕಾರದ ಸೂಚನೆಯಂತೆ ಧಾರವಾಡ ಜಿಲ್ಲೆಯಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತವಾದ ರಾಜ್ಯದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯುತ್ತಿವೆ.ರಾಜ್ಯ ಸರ್ಕಾರ ಸೂಚನೆ ನೀಡುತ್ತಿದ್ದಂತೆ ರಾಜ್ಯದಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತವಾಗಿ ಸಂವಿಧಾನ ಕುರಿತಂತೆ ಅರ್ಥಪೂರ್ಣವಾದ ಕಾರ್ಯಕ್ರಮಗಳು ಕೂಡಾ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಯಿಂದ ನಡೆಯುತ್ತಿದ್ದು

https://youtu.be/0VoCtNIf54Y?si=_pOF5La8hso5oPuY

ಸಮಾಜ ಕಲ್ಯಾಣ ಇಲಾಖೆಯಿಂದ ಈ ಒಂದು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.ಜಿಲ್ಲೆಯ ಹಲವೆಡೆ ರಾಜ್ಯ ಸರ್ಕಾರದ ಸೂಚನೆಯಂತೆ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಧಾರವಾಡ ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯತ್ ,ಸಮಾಜ ಕಲ್ಯಾಣ ಇಲಾಖೆಯಿಂದ ಈಗಾಗಲೇ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸಂವಿಧಾನ ಜಾಗೃತಿಯ ಕಾರ್ಯಕ್ರಮಗಳನ್ನು ಆಯೋ ಜಿಸಲಾಗಿತ್ತು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಅಲ್ಲಾಬಕಾಷ್ ಎಮ್ ಎಸ್ ಇವರ ಮಾರ್ಗದರ್ಶನದಲ್ಲಿ ಆಯಾ ತಾಲ್ಲೂಕಿನ ಇಲಾಖೆಯ ಸಹಾಯಕ ನಿರ್ದೇಶಕರು ಈ ಒಂದು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ.

https://youtu.be/0VoCtNIf54Y?si=_pOF5La8hso5oPuY

ಪ್ರಮುಖವಾಗಿ ಮೆರವಣಿಗೆ ಮೂಲಕ ಎಲ್ಲಾ ಬೀದಿ ಬೀದಿಗಳಲ್ಲಿ ಎಲ್ಲಾ ಗ್ರಾಮಗಳಲ್ಲಿ ಸಂವಿಧಾನ ಪ್ರಸ್ತಾವನೆ ವಾಚಿಸುವ ಮೂಲಕ ಅರಿವು ಮೂಡಿಸಲಾಗುತ್ತಿದೆ.ಅಲ್ಲದೇ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂವಿಧಾನ ಕುರಿತಂತೆ ಜಾಗೃತಿಯನ್ನು ಕೂಡಾ ಮೂಡಿಸಲಾಗುತ್ತಿದ್ದು ಇದರೊಂದಿಗೆ ಸಂವಿಧಾನ ಕುರಿತಂತೆ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲಾಗುತ್ತಿದ್ದು ಅರ್ಥಪೂರ್ಣವಾದ ಈ ಒಂದು ಕಾರ್ಯಕ್ರಮವನ್ನು ಆಯೋಜನೆ ಮಾಡಿರುವ ಕುರಿತಂತೆ ಜಿಲ್ಲೆಯ ಎಲ್ಲಾ ಗ್ರಾಮಸ್ಥರು ಕೂಡಾ ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ.ಹೀಗಾಗಿ ಈ ಒಂದು ಕಾರ್ಯಕ್ರಮಗಳು ಜಿಲ್ಲೆಯಲ್ಲಿ ಮುಂದುವರೆದಿದ್ದು ಕಲಘಟಗಿ ತಾಲೂಕಿನ ಮಾಡಕಿಹೊನ್ನಳ್ಳಿ ಗ್ರಾಮ ಪಂಚಾಯತದಲ್ಲಿ ಸಂವಿಧಾನ ಜಾಗೃತಿ ಜಾಥವನ್ನು ಸೈಕಲ್ ಜಾಥಾದ ಮೂಲಕ ಮಾಡಲಾಯಿತು. ಪ ಪಂ ಮತ್ತು ಪ ಜಾ ಮುಖಂಡರು ಗ್ರಾಮ ಪಂಚಾಯತ್ ದಾಸ್ತಿಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸರ್ವ ಸದ್ಯಸರು ಮತ್ತು ಗ್ರಾಮಸ್ಥರು ಮತ್ತು ಸಹಾಯಕ ನಿರ್ದೇಶಕರು ಕಲಘಟಗಿ ಇವರು ಸೈಕಲ್ ಜಾಥಾದ ಮೂಲಕ ಚಾಲನೆ ಕೊಟ್ಟರು ಮತ್ತು ಶಾಲಾ ವಿದ್ಯಾರ್ಥಿಗಳು ಭವ್ಯವಾಗಿ ಸ್ವಾಗತಿಸಿದ್ದು ಕಂಡು ಬಂದಿತು.ಇದರೊಂದಿಗೆ ಕಲಘಟಗಿ ಪಟ್ಟಣದಲ್ಲೂ ಕೂಡಾ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಗಳು ಕಂಡು ಬಂದವು.ಮುಖ್ಯ ನ್ಯಾಯಧೀಶರು, ಸ ನಿ ಸ ಕ ಇ ಕಲಘಟಗಿ ಯವರು ಉತ್ಸಾಹದಿಂದ ಪಾಲ್ಗೊಂಡು ಪಥ ಸಂಚಲನ ಮಾಡಿದರು.ಈ ಒಂದು ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉದಯ ವಾರ್ತೆ ಹುಬ್ಬಳ್ಳಿ


Share to all

You May Also Like

More From Author