ದಾವಣಗೆರೆ:- ಸಾಮೂಹಿಕ ರೇಪ್ ಆಗಿದೆ ಎಂದ ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಅಬ್ಬಿಸಿದ ಸುದ್ದಿಗೆ ಇದೀಗ ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟನೆ ಕೊಟ್ಟಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಸುಳ್ಳು ಸುದ್ದಿ ಅಂತ ಸಾಬೀತಾಗಿದೆ. ಬಳಿಕ ಪೊಲೀಸರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರನ್ನು ಕರೆಸಿ, ಇನ್ನೊಮ್ಮೆ ಈ ರೀತಿ ಪೋಸ್ಟ್ ಹಾಕದಂತೆ ತಾಕೀತು ಮಾಡಿದರು. ಇದು ಅಪರಾಧವಾಗಿದ್ದು, ಮರುಕಳಿಸಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಉಮಾ ಪ್ರಶಾಂತ ಎಚ್ಚರಿಕೆ ನೀಡಿದರು.
ಇನ್ನೂ ದಾವಣಗೆರೆ ಮೂಲದ ವಿದ್ಯಾರ್ಥಿಯೊಬ್ಬಳು ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ “ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಓರ್ವ ವಿದ್ಯಾರ್ಥಿನಿ ಮೇಲೆ ಯುವಕರಿಂದ ಗ್ಯಾಂಗ್ ರೇಪ್ ಆಗಿದೆ. ಹುಷಾರಾಗಿ ಓಡಾಡಿ. ಒಬ್ಬಂಟಿಯಾಗಿ ಓಡಾಡಬೇಡಿ ಎಂದು ಪೋಸ್ಟ್ ಹಾಕಿಕಿದ್ದಳು. ಇದು ರಾಜ್ಯಾದ್ಯಂತ ಹರಿದಾಡಿತ್ತು.